Friday, May 17, 2024
spot_img
More

    Latest Posts

    ಶ್ರೀಜ್ಯೋತಿ ಸಮುದಾಯ ಭವನ ಜೀರ್ಣೋದ್ಧಾರಕ್ಕೆ 10 ಲಕ್ಷ ರೂಪಾಯಿ ಧನಸಹಾಯ

    ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿನ ಶ್ರೀಜ್ಯೋತಿ ಸಮುದಾಯ ಭವನ ಜೀರ್ಣೋದ್ಧಾರಕ್ಕೆ ಹತ್ತು ಲಕ್ಷ ರೂಪಾಯಿ ಧನಸಹಾಯ ದೇಣಿಗೆಯಾಗಿ ಬಂದಿದೆ.

    ಮುಧೋಳ ತಾಲೂಕು ಗಾಣಿಗ ಸಮಾಜ ಸೇಮಾಭಿವೃದ್ಧಿ ಸಂಘದ ವತಿಯಿಂದ ಮುಧೋಳ ಮಹಾನಗರದಲ್ಲಿ ಶ್ರೀಜ್ಯೋತಿ ಸಮುದಾಯ ಭವನದ ಜೀರ್ಣೋದ್ಧಾರ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

    ಈ ಜೀರ್ಣೋದ್ಧಾರ ಕಾರ್ಯಕ್ಕೆ ಮುಧೋಳದ ಕಲ್ಲಪ್ಪ ಶಂಕ್ರಪ್ಪ ಗಡ್ಡಿ ಅವರು ಐದು ಲಕ್ಷ ರೂ. ಹಾಗೂ ಅಶೋಕ ಶಂಕ್ರಪ್ಪ ಗಡ್ಡಿ ಅವರು ಐದು ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಹೀಗೆ ಮುಧೋಳದ ಗಡ್ಡಿ ಪರಿವಾರದ ಈ ಎರಡು ಕುಟುಂಬದವರಿಂದ ಹತ್ತು ಲಕ್ಷ ರೂ. ಧನಸಹಾಯ ಬಂದಿದೆ.

    ಶ್ರೀಜ್ಯೋತಿ ಸಮುದಾಯ ಭವನ ಜೀರ್ಣೋದ್ಧಾರ ಕುರಿತ ಈ ಧನಸಹಾಯವನ್ನು ಈ ಕುಟುಂಬದವರು ಇತ್ತೀಚೆಗೆ ಚೆಕ್‌ ಮೂಲಕ ಹಸ್ತಾಂತರಿಸಿದರು. ಗಡ್ಡಿ ಪರಿವಾರದ ಈ ಎರಡು ಕುಟುಂಬಕ್ಕೆ  ಮುಧೋಳ ತಾಲೂಕಿನ ಗಾಣಿಗ ಸಮಾಜದ ಪರವಾಗಿ ಸಂಘವು ಕೃತಜ್ಞತೆಗಳನ್ನು ಸಲ್ಲಿಸಿದೆ.

    ಸಂಬಂಧಿತ ಸುದ್ದಿ: ಟೀಮ್‌ ಏಕತಾ: ಇದು ಈ ಸಮಾಜದಲ್ಲಿ ಸಂಕಷ್ಟದಲ್ಲಿ ಇರುವವರ ಆಶಾಕಿರಣ

    ಸಂಬಂಧಿತ ಸುದ್ದಿ:ಪಿಎಂ-ವಿಶ್ವಕರ್ಮ ಯೋಜನೆಯಲ್ಲಿ ಗಾಣಿಗರನ್ನೂ ಸೇರಿಸುವಂತೆ ಪ್ರಧಾನಿ ಮೋದಿಗೆ ಮನವಿ

    ಸಂಬಂಧಿತ ಸುದ್ದಿ: ಪಂಚರಾಜ್ಯ ಚುನಾವಣೆ: ಛತ್ತೀಸ್‌ಗಢದಲ್ಲಿ 12 ಗಾಣಿಗ ಅಭ್ಯರ್ಥಿಗಳಿಗೆ ವಿಜಯ; ಮಧ್ಯಪ್ರದೇಶ, ರಾಜಸ್ಥಾನದಲ್ಲೂ ಗೆಲುವು

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!