Thursday, May 2, 2024
spot_img
More

    Latest Posts

    ಅಯೋಧ್ಯೆ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಚಿತ್ರಗಿ ಮಠದಲ್ಲಿ 1008 ಶ್ರೀರಾಮ ತಾರಕ ಮಂತ್ರ ಹವನ

    ಬೆಂಗಳೂರು: ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಜ.22ರಂದು ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು, ಆ ದಿನಕ್ಕಾಗಿ ದೇಶದ ಅಸಂಖ್ಯಾತ ಭಕ್ತರು ಉತ್ಸುಕತೆಯಿಂದ ಕಾಯುತ್ತಿದ್ದಾರೆ.

    ಅಂದು ದೇಶಾದ್ಯಂತ ಹಬ್ಬದ ವಾತಾವರಣ ಇರಲಿದ್ದು, ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆಯಲಿವೆ. ಅದೇ ರೀತಿ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಚಿತ್ರಗಿಯ ಶ್ರೀರಾಮಚಂದ್ರ ದೇವರು ಮಠದಲ್ಲಿಯೂ ವಿಶೇಷ ಪೂಜೆ ಜರುಗಲಿದೆ.

    ಅಯೋಧ್ಯೆಯಲ್ಲಿ ಜ. 22ರಂದು ಪ್ರಾಣ ಪ್ರತಿಷ್ಠಾಪನೆ ನಡೆಯುವ ಸಂದರ್ಭದಲ್ಲೇ ಚಿತ್ರಗಿ ಮಠದ ಶ್ರೀ ರಾಮಚಂದ್ರ ದೇವಸ್ಥಾನದ ಭಕ್ತರೆಲ್ಲ ಸೇರಿ ವೇದಮೂರ್ತಿ ವಿನಾಯಕ ಜೋಶಿ ಅವರ ನೇತೃತ್ವದಲ್ಲಿ 1008 ಶ್ರೀ ರಾಮ ತಾರಕ ಮಂತ್ರ ಹವನ ನಡೆಸಲಿದ್ದಾರೆ.

    ಅಲ್ಲದೆ ಅಯೋಧ್ಯೆಯಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾಪನಾ ಸಮಯವಾದ ಮಧ್ಯಾಹ್ನ 12 ಗಂಟೆ 30 ನಿಮಿಷಕ್ಕೆ ಸರಿಯಾಗಿ ಶಂಖನಾದದೊಂದಿಗೆ ಮಹಾಮಂಗಳಾರತಿ ನಡೆಸಿ ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಈ ಪೂಜಾ ಕಾರ್ಯಕ್ರಮದ ಬಳಿಕ ಪ್ರಸಾದ ಭೋಜನ ವ್ಯವಸ್ಥೆ ಕೂಡ ಇರಲಿದೆ.

    ನಂತರ ಸಂಧ್ಯಾ ಸಮಯದಲ್ಲಿ ಹಣತೆಯಲ್ಲಿ ದೀಪಗಳನ್ನು ಹಚ್ಚುವುದು ಹಾಗೂ ಭಜನಾ ಕಾರ್ಯಕ್ರಮ ಕೂಡ ಇರಲಿದ್ದು, ಭಕ್ತರು ಇದರಲ್ಲಿಯೂ ಭಾಗವಹಿಸಬೇಕಾಗಿ ವಿನಂತಿ ಮಾಡಿಕೊಳ್ಳಲಾಗಿದೆ.  ಈ ವಿಶೇಷ ಪೂಜೆ ಪ್ರಯುಕ್ತ ಭಕ್ತರು ಸೇವಾರ್ಥವಾಗಿ ದೀಪದ ಎಣ್ಣೆ ಹಾಗೂ ದೇಣಿಗೆ ನೀಡಬಹುದು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

    ಸಂಬಂಧಿತ ಸುದ್ದಿ: ಶ್ರೀವೇಣುಗೋಪಾಲಕಷ್ಣ ಸನ್ನಿಧಿಯಲ್ಲಿ ಅದ್ಧೂರಿ ದೀಪೋತ್ಸವ; ಹಾರಾಡಿ ರಾಮ ಗಾಣಿಗ ಪ್ರಶಸ್ತಿ ಪ್ರದಾನ

    ಸಂಬಂಧಿತ ಸುದ್ದಿ: ಪುರಾತನ ಚಿತ್ರಗಿ ಶ್ರೀ ರಾಮಚಂದ್ರ ಮಠದಲ್ಲಿ ಶನಿವಾರ ದೀಪೋತ್ಸವ

    ಸಂಬಂಧಿತ ಸುದ್ದಿ: ಗೋಕರ್ಣ ದೇವಸ್ಥಾನದಲ್ಲಿ ಗಾಣಿಗ ಸಮಾಜದವರಿಂದ ಪ್ರಪ್ರಥಮ ಕಾರ್ತಿಕ ಪೂಜೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!