Thursday, May 2, 2024
spot_img
More

    Latest Posts

    ಸಮುದಾಯದ ಬೇಡಿಕೆಗಳನ್ನು ಈಡೇರಿಸುವಂತೆ ಗಾಣಿಗರ ಸಂಘದಿಂದ ಮತ್ತೆ ಸಿಎಂ ಭೇಟಿ

    ಬೆಂಗಳೂರು: ಗಾಣಿಗ ಸಮುದಾಯದ ಬೇಡಿಕೆಗಳನ್ನು ಈಡೇರಿಸುವಂತೆ ಅಖಿಲ ಕರ್ನಾಟಕ ಗಾಣಿಗರ ಸಂಘ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದೆ.

    ವಿಧಾನಪರಿಷತ್‌ ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌ ಅವರೊಂದಿಗೆ ಅಖಿಲ ಕರ್ನಾಟಕ ಗಾಣಿಗರ ಸಂಘದ ಅಧ್ಯಕ್ಷ ಎಂ.ಆರ್.ರಾಜಶೇಖರ್‌ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಲಿಖಿತ ಮನವಿ ಸಲ್ಲಿಸಿದರು.

    ಅಖಿಲ ಕರ್ನಾಟಕ ಗಾಣಿಗರ ಸಂಘ ಕಳೆದ ಡಿಸೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಗಾಣಿಗರ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿ ನೀಡಿದ್ದ ಆಶ್ವಾಸನೆಗಳನ್ನು ನೆನಪಿಸಿ ಅವುಗಳನ್ನು ಈಡೇರಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ರಾಜಶೇಖರ್‌ ತಿಳಿಸಿದ್ದಾರೆ.

    ಅದರಲ್ಲೂ ಗಾಣಿಗರ ಸಮಾವೇಶದಲ್ಲಿ ನೀಡಿದ್ದ ಆಶ್ವಾಸನೆಗಳನ್ನು, ಪ್ರಮುಖವಾಗಿ ಗಾಣಿಗ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರು ಪದಾಧಿಕಾರಿಗಳ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮತ್ತೊಮ್ಮೆ ಕೋರಿಕೊಳ್ಳಲಾಯಿತು ಎಂದು ಅವರು ತಿಳಿಸಿದ್ದಾರೆ.  

    ಸಂಬಂಧಿತ ಸುದ್ದಿ: ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ‌ ಸ್ಥಾಪನೆ; ಕೊನೆಗೂ ಈಡೇರಿತು ಬಹುಕಾಲದ ಪ್ರಾರ್ಥನೆ

    ಅಖಿಲ ಕರ್ನಾಟಕ ಗಾಣಿಗರ ಸಂಘ ಕಳೆದ ಡಿಸೆಂಬರ್‌ನಲ್ಲಿ ಬೆಂಗಳೂರಿನ ಅಲಹಳ್ಳಿ ಅಂಜನಾಪುರದಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸವ ಸಮಾರಂಭ ಮತ್ತು ಗಾಣಿಗ ಜನಾಂಗದ ಸಮಾವೇಶ, ನೂತನ  ಕಟ್ಟಡ ಬ್ಲಾಕ್-1 ಉದ್ಘಾಟನೆ ಹಾಗೂ ಬ್ಲಾಕ್ -2 ಕಟ್ಟಡ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದ್ದರು.

    ಸಂಬಂಧಿತ ಸುದ್ದಿ: ದಿನದ ಶುಭಾಶಯ ಎಂಬ ಹೊಸ ಅವಕಾಶ: ಮೊದಲ 25 ಮಂದಿಗೆ ಶುಲ್ಕದಲ್ಲಿ ಶೇ. 50 ರಿಯಾಯಿತಿ

    ಸಂಬಂಧಿತ ಸುದ್ದಿ: ಸಾಮಾಜಿಕ ನ್ಯಾಯ ಕುರಿತು ರಾಜಿ ಇಲ್ಲದ ಕೆಲಸ: ಸಿಎಂ ಸಿದ್ದರಾಮಯ್ಯ ಭರವಸೆ

    ಸಂಬಂಧಿತ ಸುದ್ದಿ: ಅಖಿಲ ಕರ್ನಾಟಕ ಗಾಣಿಗರ ಸಂಘದ ಕೇಂದ್ರ ಕಚೇರಿಗೆ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌ ಭೇಟಿ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!