ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ತೋಟಗಾರಿಕೆ ಉತ್ಪನ್ನ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣಾ ಸಂಘ (ಹಾಪ್ ಕಾಮ್ಸ್ ) ಮಂಗಳೂರು ಇದರ ಅಧ್ಯಕ್ಷರಾಗಿ ಕುಂದಾಪುರ ತಾಲೂಕು ಗಾಣಿಗ ಸಂಘದ ಸದಸ್ಯರಾದ ಶ್ರೀ ಸೀತಾರಾಮ ಗಾಣಿಗ ಹಾಲಾಡಿ ಆಯ್ಕೆ ಆಗಿರುತ್ತಾರೆ. ಮುಂದಿನ ಐದು ವರ್ಷಗಳ ಕಾಲ ಇವರು ಹಾಪ್ ಕಾಮ್ಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಭಾರತೀಯ ಕಿಸಾನ್ ಸಂಘ ಬೆಂಬಲಿತ ರೈತ ಪ್ರತಿನಿಧಿಗಳಾದ ಸೀತಾರಾಮ ಗಾಣಿಗರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ನೂತನ ಅಧ್ಯಕ್ಷರಾಗಿ ಹಾಗೂ ಶ್ರೀಮತಿ ವಿನಯಾ ರಾನಡೆಯವರು ಉಪಾಧ್ಯಕ್ಷರಾಗಿ 11 – 5 ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ.
ಭಾರತೀಯ ಕಿಸಾನ್ ಸಂಘ ಉಡುಪಿ ಜಿಲ್ಲಾ ಸಮಿತಿ ಇಬ್ಬರಿಗೂ ಅಭಿನಂದನೆ ಸಲ್ಲಿಸಿದೆ. ಸೀತಾರಾಮ ಗಾಣಿಗರ ಅಧಿಕಾರಾವಧಿಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ಉತ್ತಮ ಅಭಿವೃದ್ಧಿ ಕಾಣಲಿ ಎಂದು ‘ಗ್ಲೋಬಲ್ ಗಾಣಿಗ’ ಶುಭ ಹಾರೈಸುತ್ತಿದೆ.