Saturday, September 21, 2024
spot_img
More

    Latest Posts

    ಸಂಘದಲ್ಲಿ 24 ವರ್ಷಗಳ ಕಾಲ ನೇತೃತ್ವ, ಕೆ. ಗೋಪಾಲ್ ದಂಪತಿಗೆ ಸನ್ಮಾನ

    ಬೆಂಗಳೂರು: ಸೋಮಕ್ಷತ್ರಿಯ ಗಾಣಿಗ ಸಮಾಜ ಉಡುಪಿ ಇದರ ಅಧ್ಯಕ್ಷರಾಗಿ 24 ವರ್ಷಗಳ ಸುದೀರ್ಘ ಅವಧಿಗೆ ಜವಾಬ್ದಾರಿ ನಿಭಾಯಿಸಿರುವ ಕೆ‌.ಗೋಪಾಲ್ ಅವರನ್ನು ಇತ್ತೀಚೆಗೆ ಸನ್ಮಾನಿಸಲಾಯಿತು.

    ಸೋಮಕ್ಷತ್ರಿಯ ಗಾಣಿಗ ಸಮಾಜದವರ ಕುಲದೇವರಾದ ಬಾರ್ಕೂರು ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಅನ್ನಪೂರ್ಣೇಶ್ವರಿ ಮಹಿಳಾ ಸಂಘದ ಎಂಟನೇ ಸಾಮೂಹಿಕ ಸತ್ಯನಾರಾಯಣ ಪೂಜೆ ನೆರವೇರಿತು. ಇದೇ ಸಂದರ್ಭದಲ್ಲಿ ಅನ್ನಪೂರ್ಣೇಶ್ವರಿ ಮಹಿಳಾ ಸಂಘದ ವತಿಯಿಂದ ಕಿನ್ನಿಮೂಲ್ಕಿ ಗೋಪಾಲ್ ಮತ್ತು ವಸಂತಿ ಗೋಪಾಲ್ ದಂಪತಿಯನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.

    ಗೋಪಾಲ್ ಅವರು ಇಪ್ಪತ್ತನಾಲ್ಕು ವರ್ಷಗಳ ಕಾಲ ಉಡುಪಿ ಸೋಮಕ್ಷತ್ರಿಯ ಗಾಣಿಗ ಸಮಾಜದ ಮುಖ್ಯಸ್ಥರಾಗಿದ್ದು, ಹಲವಾರು ಸಾಮಾಜಿಕ-ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು.

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!