ಬೆಂಗಳೂರು: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಯಡಮೊಗೆಯ ಕೃಷಿ ಕುಟುಂಬದ ಉದಯ ಗಾಣಿಗ ಅವರನ್ನು ದುಷ್ಕರ್ಮಿಗಳು ಕೊಲೆಗೈದಿರುವುದು ಅತ್ಯಂತ ಹೀನ ಕೃತ್ಯವಾಗಿದ್ದು, ಇದನ್ನು ‘ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಂಘಟನೆ ರಿ.’ ತೀವ್ರವಾಗಿ ಖಂಡಿಸಿದೆ.
ಈ ಕೊಲೆ ಪ್ರಕರಣದಲ್ಲಿ ಭಾಗಿಯಾದ ಎಲ್ಲ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಯಾಗುವಂತೆ ಪೊಲೀಸ್ ಇಲಾಖೆ ಕ್ರಮಕೈಗೊಂಡು ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಮಾತ್ರವಲ್ಲ ಯಾವುದೇ ಪಕ್ಷದ ರಾಜಕೀಯ ಮುಖಂಡರು ಈ ಪ್ರಕರಣದಲ್ಲಿ ಯಾವುದೇ ಹಸ್ತಕ್ಷೇಪ ಮಾಡದೆ ನಿಷ್ಪಕ್ಷಪಾತ ತನಿಖೆಗೆ ಸಹಕಾರ ನೀಡಬೇಕು. ಇಲ್ಲವಾದರೆ ಸಮಾಜದ ಓರ್ವ ವ್ಯಕ್ತಿಗಾದ ಅನ್ಯಾಯವನ್ನು ಪ್ರತಿಭಟಿಸುವ ನಿಟ್ಟಿನಲ್ಲಿ ಜಿಲ್ಲಾ ಗಾಣಿಗ ಸಂಘಟನೆ ಜಿಲ್ಲೆಯಾದ್ಯಂತ ಹೋರಾಟಕ್ಕೆ ಕರೆ ನೀಡಲಿದೆ ಎಂದು ಸಂಘಟನೆಯ ಪರವಾಗಿ ಜಿಲ್ಲಾಧ್ಯಕ್ಷ ವಾಸುದೇವ ಬೈಕಾಡಿ ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸಲು ಬಾರ್ಕೂರಿನ ಮೂಡುಕೇರಿಯಲ್ಲಿರುವ ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಂಘಟನೆ ಮುಂದಿನ ನಡೆಗಳ ಬಗ್ಗೆ ನಿರಂತರ ಚರ್ಚೆ ನಡೆಸುತ್ತಿದೆ. ಮಾತ್ರವಲ್ಲ ರಾಜ್ಯದ ವಿವಿಧ ಭಾಗಗಳಲ್ಲಿರುವ ಗಾಣಿಗ ಸಂಘಟನೆಯ ಪ್ರಮುಖರು ಕೂಡ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸುತ್ತಿದ್ದು, ನೊಂದವರಿಗೆ ನ್ಯಾಯ ಸಿಗುವವರೆಗೂ ಪ್ರಕರಣದ ಬೆನ್ನುಹತ್ತಲು ನಿರ್ಧರಿಸಿದ್ದಾರೆ.
ಸಂಬಂಧಿತ ಸುದ್ದಿ: ಉದಯ ಗಾಣಿಗ ಕೊಲೆ ಆರೋಪಿ ಪ್ರಾಣೇಶ್ ಬಂಧನ; ಪ್ರಶ್ನಿಸಿದ್ದಕ್ಕೆ ಪ್ರಾಣ ತೆಗೆದ ಗ್ರಾಮ ಪಂಚಾಯತ್ ಅಧ್ಯಕ್ಷ?
ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ ಈ ಕೆಳಗಿನ 'ಐಡಿ'ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. G-Mail ID: [email protected]