ಬೆಂಗಳೂರು: ಸೋಮಕ್ಷತ್ರಿಯ ಗಾಣಿಗ ಸಮಾಜದವರ ಕುಲಗುರುಗಳಾದ ಶ್ರೀ ಶ್ರೀ ಲಕ್ಷ್ಮೀಂದ್ರ ತೀರ್ಥ ಶ್ರೀಪಾದಂಗಳವರ ಚಾತುರ್ಮಾಸ್ಯ ವ್ರತವು ಚನ್ನಪಟ್ಟಣ ಸಮೀಪದ ಅಬ್ಬೂರು ಮಠದಲ್ಲಿ ಆರಂಭವಾಗಿದೆ.
ಈ ಹಿನ್ನೆಲೆಯಲ್ಲಿ ಸೋಮಕ್ಷತ್ರಿಯ ಗಾಣಿಗ ಸಮಾಜ ಬೆಂಗಳೂರು ಹಾಗೂ ಕುಂದಾಪುರ ತಾಲೂಕು ಗಾಣಿಗ ಸಮಾಜದ ಸದಸ್ಯರು ಅಬ್ಬೂರು ಮಠಕ್ಕೆ ತೆರಳಿ, ಸ್ವಾಮೀಜಿಯವರ ದರ್ಶನ ಪಡೆದು ಅವರ ಅನುಗ್ರಹಕ್ಕೆ ಪಾತ್ರರಾದರು.
ಸೋಮಕ್ಷತ್ರಿಯ ಗಾಣಿಗ ಸಮಾಜ ಬೆಂಗಳೂರು ಇದರ ಗೌರವಾಧ್ಯಕ್ಷ ಬಿ.ಎಸ್. ಮಂಜುನಾಥ, ಅಧ್ಯಕ್ಷ ಎಚ್.ಟಿ. ನರಸಿಂಹ, ಉಪಾಧ್ಯಕ್ಷರಾದ ಕೆ.ಎಂ.ಲಕ್ಷ್ಮಣ, ಪ್ರಧಾನ ಕಾರ್ಯದರ್ಶಿ ಜಗದೀಶ್, ಪದಾಧಿಕಾರಿಗಳಾದ ಪ್ರಕಾಶ್ಚಂದ್ರ ಕುತ್ಪಾಡಿ, ಪ್ರಕಾಶ್ ವೆಂಕಟರಮಣ, ಲಕ್ಷ್ಮೀ ವಿಠಲ್, ಸುಧಾ ಜಗದೀಶ್, ಕೆ.ಎಂ. ರಾಮ, ಜಿ.ಆರ್. ಚಂದ್ರಯ್ಯ, ರಾಜಾ ಪಡುಕೋಣೆ, ಸೂರ್ಯನಾರಾಯಣ, ಪ್ರಮೋದ್, ನಾಗೇಶ್ ಆಜ್ರಿ, ಶೋಭಾ ನಾಗೇಶ್, ಕುಂದಾಪುರ ತಾಲೂಕು ಗಾಣಿಗ ಸಮಾಜದ ಕೊಗ್ಗ ಗಾಣಿಗ, ಶ್ರೀವೇಣುಗೋಪಾಲಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಗೋಪಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.
ಸಂಬಂಧಿತ ಸುದ್ದಿ: ಸೋಮಕ್ಷತ್ರಿಯ ಗಾಣಿಗ ಸಮಾಜದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ಸಂಬಂಧಿತ ಸುದ್ದಿ: ವ್ಯಾಸರಾಜ ಮಠದ ಶ್ರೀ ಲಕ್ಷ್ಮೀಂದ್ರ ತೀರ್ಥರಿಂದ ಮುದ್ರಾಧಾರಣೆ, ಆಶೀರ್ವಚನ, ವರ್ಧಂತ್ಯುತ್ಸವ
ಸಂಬಂಧಿತ ಸುದ್ದಿ: ಬಾರ್ಕೂರು ದೇವಸ್ಥಾನದಲ್ಲಿ ಇಂದು-ನಾಳೆ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ