ಬೆಂಗಳೂರು: ಚಾಮರಾಜಪೇಟೆ ನಿವಾಸಿಗರು ಸ್ಥಾಪಿಸಿರುವ ‘ಚಾಮರಾಜಪೇಟೆ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ (ರಿ.)’ ಉದ್ಘಾಟನೆ ಮುಂದೂಡಲಾಗಿದೆ.
ಸಂಘದ ಉದ್ಘಾಟನೆ ಅ.16ರ ಶನಿವಾರ ಚಾಮರಾಜಪೇಟೆಯ ಮಕ್ಕಳಕೂಟದಲ್ಲಿ ನಡೆಸುವುದು ಎಂದು ಈ ಹಿಂದೆ ನಿಗದಿ ಮಾಡಲಾಗಿತ್ತು. ಆದರೆ ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಕಾರಣದಿಂದಾಗಿ ಉದ್ಘಾಟನೆ ಮುಂದೂಡಲಾಗಿದೆ.
ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಈ ಕುರಿತು ಚರ್ಚಿಸಿ ಒಮ್ಮತದ ನಿರ್ಧಾರ ತಳೆಯಲಾಗಿದ್ದು, ಮುಂದಿನ ಉದ್ಘಾಟನೆಯ ದಿನವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಸಂಘದ ನಿಯೋಜಿತ ಅಧ್ಯಕ್ಷ ಬಿ.ಎಸ್. ಸುಬ್ಬಣ್ಣ ತಿಳಿಸಿದ್ದಾರೆ.
ಸಂಬಂಧಿತ ಸುದ್ದಿ: ಚಾಮರಾಜಪೇಟೆ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಪ್ರಪ್ರಥಮ ಅಧ್ಯಕ್ಷರಾಗಿ ಬಿ.ಎಸ್. ಸುಬ್ಬಣ್ಣ
ಸಂಬಂಧಿತ ಸುದ್ದಿ: ಮಾರ್ದನಿಸುತ್ತಿವೆ ಗಾಣಿಗರ ಕುರಿತು ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿರುವ ಆ ಮಾತುಗಳು..
ಸಂಬಂಧಿತ ಸುದ್ದಿ: ನಮ್ಮದು ಸಣ್ಣ ಸಮಾಜ, ಕಡಿಮೆ ಜನಸಂಖ್ಯೆ ಎಂಬ ಭಾವನೆ ಬೇಡ; ಗಾಣಿಗ ಸಮುದಾಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲಹೆ