Saturday, September 21, 2024
spot_img
More

    Latest Posts

    ಶಾಸಕ ದಿನಕರ ಶೆಟ್ಟಿ, ಮಾಜಿ ಶಾಸಕಿ ಶಾರದಾ ಶೆಟ್ಟಿ ಉಪಸ್ಥಿತಿಯಲ್ಲಿ ವಿಧ್ಯುಕ್ತವಾಗಿ ಉದ್ಘಾಟನೆ ಆಗಲಿದೆ ಗಾಣಿಗ ಯುವ ಬಳಗ

    ಬೆಂಗಳೂರು: ಗಾಣಿಗ ಸಮಾಜದ ಸಾಕಷ್ಟು ಚಟುವಟಿಕೆಗಳ‌ ಮೂಲಕ ಈಗಾಗಲೇ ಸಮಾಜದ ಹಲವರ ಗಮನ ಸೆಳೆದಿರುವ ಕುಮಟಾ ಗಾಣಿಗ ಯುವ ಬಳಗ (ರಿ.) ಪಾಲಿಗೆ ಈ ವರ್ಷದ ನವೆಂಬರ್‌ 14 ಮಹತ್ವದ ದಿನ. ಏಕೆಂದರೆ ಅಂದು ಗಾಣಿಗ ಯುವ ಬಳಗ ವಿಧ್ಯುಕ್ತವಾಗಿ ಉದ್ಘಾಟನೆ ಆಗಲಿದೆ. ಕುಮಟಾ ಚಿತ್ರಗಿಯಲ್ಲಿರುವ ಶ್ರೀರಾಮಚಂದ್ರ ಸಭಾಭವನದಲ್ಲಿ ನ. 14ರ ರವಿವಾರ ಈ ಉದ್ಘಾಟನಾ ಸಮಾರಂಭ ನಡೆಯಲಿದೆ.

    ಕುಮಟಾ ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ, ಗಾಣಿಗ ಸಮಾಜದವರೇ ಆಗಿರುವ ಕೆ.ದಿನಕರ ಶೆಟ್ಟಿ ಅವರು ಈ ಯುವ ಬಳಗವನ್ನು ಉದ್ಘಾಟಿಸಲಿರುವುದು ಮತ್ತೊಂದು ಸಂತೋಷದ ವಿಷಯ. ಗಾಣಿಗ ಸಮಾಜದ ಇನ್ನೊಬ್ಬ ರಾಜಕಾರಣಿ, ಕುಮಟಾ ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಮೋಹನ ಶೆಟ್ಟಿ ಅವರು ಈ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಇಂಡಿಯಾಕಾಸ್ಟ್‌ನ ಅಸೋಸಿಯೇಟ್‌ ಡೈರೆಕ್ಟರ್‌ ಎ.ಪಿ.ಗಿರೀಶ್‌ ಅವರು ಇದೇ ಸಂದರ್ಭದಲ್ಲಿ ಯುವಬಳಗದ ವೆಬ್‌ಸೈಟ್‌ ಲೋಕಾರ್ಪಣೆ ಮಾಡಲಿದ್ದಾರೆ.

    ಕುಮಟಾ ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ. ದಿನಕರ ಶೆಟ್ಟಿ ಮತ್ತು ಮಾಜಿ ಶಾಸಕಿ ಶಾರದಾ ಮೋಹನ ಶೆಟ್ಟಿ.

    ಕುಮಟಾ ಶ್ರೀರಾಮಚಂದ್ರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಡಾ.ವಿ.ಜಿ. ಶೆಟ್ಟಿ, ಉತ್ತರ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾಸಂಘದ ಅಧ್ಯಕ್ಷ ದಾಮೋದರ ಕೆ. ಶೆಟ್ಟಿ, ಚಿತ್ರಗಿ ಶ್ರೀರಾಮಚಂದ್ರ ದೇವಸ್ಥಾನದ ಮೊಕ್ತೇಸರ ರತ್ನಾಕರ ಎಸ್.‌ ಶೆಟ್ಟಿ, ಸಹಕಾರಿ ಸಂಘಗಳ ಸಹಾಯಕ ನಿಬಂಧಕ ನಾಗಭೂಷಣ ಸಿ. ಕಲ್ಮನೆ, ಹೊಸಾಕುಳಿ ಗ್ರಾಮ ಪಂಚಾಯತ್‌ ಸದಸ್ಯ ಸುರೇಶ ಶೆಟ್ಟಿ, ಗೋಕರ್ಣ ತಾಲೂಕು ಪಂಚಾಯತ್‌ ನಿಕಟಪೂರ್ವ ಸದಸ್ಯ ಮಹೇಶ ಜಿ. ಶೆಟ್ಟಿ, ಉದ್ಯಮಿಗಳಾದ ರವಿ ಶೆಟ್ಟಿ ಕವಲಕ್ಕಿ, ಲೋಕೇಶ ಜಿ. ಶೆಟ್ಟಿ ಹಾಗೂ ಬೈಂದೂರು ಸರ್ಕಲ್‌ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂತೋಷ ಕಾಯ್ಕಿಣಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    ಅಂದು ಬೆಳಗ್ಗೆ 9-30ರಿಂದ ಗಾಣಿಗ ಸಮಾಜ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ನಂತರ 11-30ರ ಸುಮಾರಿಗೆ ಉದ್ಘಾಟನಾ ಸಮಾರಂಭದ ಸಭಾ ಕಾರ್ಯಕ್ರಮ ನಡೆಯಲಿದೆ.  ಎಸ್‌ಎಸ್‌ಎಲ್‌ಸಿ-ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 90ಕ್ಕಿಂತ ಅಧಿಕ ಅಂಕ ಗಳಿಸಿದ ಗಾಣಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಗಾಣಿಗ ಸಮಾಜದ ನಿವೃತ್ತ ಸೈನಿಕರಿಗೆ ಸನ್ಮಾನ ಮಾಡುವಂಥ ವಿಶೇಷ ಕಾರ್ಯಕ್ರಮವನ್ನೂ ಈ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾಜ ಬಾಂಧವರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಯುವ ಬಳಗದ ಉದ್ಘಾಟನಾ ಸಮಾರಂಭದ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂಬುದಾಗಿ ಗಾಣಿಗ ಬಳಗದ ಗೌರವಾಧ್ಯಕ್ಷ ಗಣಪತಿ ಶೆಟ್ಟಿ ಮತ್ತು ಅಧ್ಯಕ್ಷ ಗಣೇಶ್‌ ಪ್ರಸಾದ್‌ ಶೆಟ್ಟಿ ವಿನಂತಿಸಿಕೊಂಡಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸುವವರು ಕೋವಿಡ್‌-19 ತಡೆ ಹಿನ್ನೆಲೆಯಲ್ಲಿ ಸುರಕ್ಷತೆಗಾಗಿ ಮಾಸ್ಕ್ ಧರಿಸಿಕೊಂಡು ಬರಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಅವರು ಕೋರಿಕೊಂಡಿದ್ದಾರೆ.

    ಸಂಬಂಧಿತ ಸುದ್ದಿ: ಪುರಾಣಪ್ರಸಿದ್ಧ ಗೋಕರ್ಣದಲ್ಲಿ ಗಾಣಿಗರ ಪ್ರಥಮ ಪೂಜೆ; ನ. 5ರಂದು ಏಕದಶ ರುದ್ರಾಭಿಷೇಕ, ದೀಪೋತ್ಸವ

    ಸಂಬಂಧಿತ ಸುದ್ದಿ: ಗಾಣಿಗ ಸಮಾಜದ ನಾಲ್ವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

    ಸಂಬಂಧಿತ ಸುದ್ದಿ: ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಾರ್ತಿಕ ಪೂಜೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!