ಬೆಂಗಳೂರು: ರಾಜ್ಯ ಮಾತ್ರವಲ್ಲದೆ ರಾಷ್ಟ್ರೀಯ- ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಾಧನೆ ತೋರುತ್ತಿರುವ ಗಾಣಿಗ ಸಮುದಾಯದ ಪ್ರತಿಭಾನ್ವಿತರು ಹಲವರಿದ್ದಾರೆ. ಅಂಥವರಲ್ಲಿ ಕೋಟ ದಿನೇಶ್ ಗಾಣಿಗ ಕೂಡ ಒಬ್ಬರು.
ಶ್ರೀಲಂಕಾದ ಕೊಲಂಬೊದಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದ ಟ್ರಿಪಲ್ ಜಂಪ್ನಲ್ಲಿ ಕೋಟ ದಿನೇಶ್ ಗಾಣಿಗ ಕಂಚಿನ ಪದಕ ಗಳಿಸಿದ್ದಾರೆ.
ಕಂಚಿನ ಪದಕ ಗಳಿಸಿದ್ದರಿಂದ ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಇವರನ್ನು ಕುಂದಾಪುರದಲ್ಲಿ ಫೆ.27ರಂದು ನಡೆದ ಸಂಪರ್ಕ ಸುಧಾ ಪತ್ರಿಕೆಯ ರಜತ ಮಹೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಸಂಬಂಧಿತ ಸುದ್ದಿ: ಕೋಟ ದಿನೇಶ್ ಗಾಣಿಗರಿಗೆ ಹುಟ್ಟೂರ ಸಮ್ಮಾನ; ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಸಂಬಂಧಿತ ಸುದ್ದಿ: ಇಂದಿನ ನ್ಯಾಷನಲ್ ಕಾಲೇಜನ್ನು ಆರಂಭಿಸಿದ್ದು ಅಂದಿನ ದೊಡ್ಡಣ್ಣ ಶೆಟ್ಟರೇ..
ಸಂಬಂಧಿತ ಸುದ್ದಿ: ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕಾಡ ಸೆರಗಿನ ಸೂಡಿಯ ಭುಗಿಲು