ಬೆಂಗಳೂರು: ಗಾಣಿಗರ ಯಾನೆ ಸಫಲಿಗರ ಆಡಳಿತದಲ್ಲಿ ನಿರ್ವಹಣೆ ಆಗುತ್ತಿರುವ ಮಂಗಳೂರಿನ ಅದ್ಯಪಾಡಿಯ ಬೀಬಿಲಚ್ಚಿಲ್ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ನಾಗಮಂಡಲ ಮತ್ತು ಬ್ರಹ್ಮಕಲಶೋತ್ಸವ ಕುರಿತು ನಾಳೆ ಪೂರ್ವಭಾವಿ ಸಭೆ ನಡೆಯಲಿದೆ.
ಮಾ. 13ರ ಬೆಳಗ್ಗೆ 9ರಿಂದ ನಡೆಯಲಿರುವ ಈ ಪೂರ್ವಭಾವಿ ಸಮಾಲೋಚನಾ ಸಭೆಗೆ ಗಾಣಿಗ ಸಮಾಜದ ಸಮಸ್ತ ಬಂಧುಗಳು ಆಗಮಿಸಿ, ಸೂಕ್ತ ಸಲಹೆ ಹಾಗೂ ಮಾರ್ಗದರ್ಶನಗಳನ್ನು ನೀಡಬೇಕು ಎಂಬುದಾಗಿ ದೇವಸ್ಥಾನದ ಆಡಳಿತ ಮೊಕ್ತೇಸರ ಮೋನಪ್ಪ ಮೇಸ್ತ್ರಿ ಅವರು ಮನವಿ ಮಾಡಿಕೊಂಡಿದ್ದಾರೆ.
ಮಂಗಳೂರಿನ ಅದ್ಯಪಾಡಿಯ ಬೀಬಿಲಚ್ಚಿಲ್ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ2023ರ ಫೆ. 2ರಿಂದ 6ರವರೆಗೆ ಬ್ರಹ್ಮ ನಾಗಮಂಡಲ ಮತ್ತು ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಆಡಳಿತ ಮೊಕ್ತೇಸರ ಮೋನಪ್ಪ ಮೇಸ್ತ್ರಿ (9900564370) ಅಥವಾ ಪ್ರಚಾರ ಸಮಿತಿಯ ರಾಜೇಶ್ ಬೀಬಿಲಚ್ಚಿಲ್ (9880054343) ಅವರನ್ನು ಸಂಪರ್ಕಿಸಬಹುದು.
ಸಂಬಂಧಿತ ಸುದ್ದಿ: ನಿಮಗೆ ಚುನಾವಣೆ ಗೆಲ್ಲಲು ಮೋದಿ ಹೆಸರು ಬೇಕು, ಗಾಣಿಗ ಸಮಾಜ ಬೇಡವೇ..?
ಸಂಬಂಧಿತ ಸುದ್ದಿ: ಇಂದಿನ ನ್ಯಾಷನಲ್ ಕಾಲೇಜನ್ನು ಆರಂಭಿಸಿದ್ದು ಅಂದಿನ ದೊಡ್ಡಣ್ಣ ಶೆಟ್ಟರೇ..
ಸಂಬಂಧಿತ ಸುದ್ದಿ: ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪವೈಭವ