ಬೆಂಗಳೂರು: ರಾಜಧಾನಿಯ ಖ್ಯಾತ ಪೀಪಲ್ ಟ್ರೀ ಗ್ರೂಪ್ ಆಫ್ ಹಾಸ್ಪಿಟಲ್ಸ್ನ ವ್ಯವಸ್ಥಾಪಕ ನಿರ್ದೇಶಕಿ ಜ್ಯೋತಿ ನೀರಜಾ ಅವರು ಆರೋಗ್ಯ ಕ್ಷೇತ್ರದಲ್ಲಿನ ಸಾಧನೆ ಹಾಗೂ ನೈಪುಣ್ಯತೆಗಾಗಿ ಮಹಿಳಾ ಸಾಧಕಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಪ್ರಜಾ ಟಿವಿ ಸುದ್ದಿವಾಹಿನಿಯವರು ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಮಾ. 10ರಂದು ಬೆಂಗಳೂರಿನ ವಸಂತನಗರದಲ್ಲಿ ಆಯೋಜಿಸಿದ್ದ ವರ್ಣರಂಜಿತ ಸಮಾರಂಭದಲ್ಲಿ ಜ್ಯೋತಿ ನೀರಜಾ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಜಾ ಟಿವಿ ನೀಡಿದ ಈ ʼವಿಮೆನ್ ಅಚೀವರ್ಸ್ ಫಾರ್ ಎಕ್ಸಲೆನ್ಸ್ ಇನ್ ಹೆಲ್ತ್ಕೇರ್ʼ ಪ್ರಶಸ್ತಿಯನ್ನು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಅವರು ಜ್ಯೋತಿ ನೀರಜಾ ಅವರಿಗೆ ಪ್ರದಾನ ಮಾಡಿದರು.
ಆಸ್ಪತ್ರೆ ಮಾತ್ರವಲ್ಲದೇ ಶ್ರೀಗಾಣಿಗ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ನ ಪ್ರೋತ್ಸಾಹಕರಾಗಿಯೂ ಜ್ಯೋತಿ ನೀರಜಾ ಅವರು ಶೈಕ್ಷಣಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಸಂಬಂಧಿತ ಸುದ್ದಿ: ಇಂದಿನ ನ್ಯಾಷನಲ್ ಕಾಲೇಜನ್ನು ಆರಂಭಿಸಿದ್ದು ಅಂದಿನ ದೊಡ್ಡಣ್ಣ ಶೆಟ್ಟರೇ..
ಸಂಬಂಧಿತ ಸುದ್ದಿ: ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪವೈಭವ
ಸಂಬಂಧಿತ ಸುದ್ದಿ: ನಿಮಗೆ ಚುನಾವಣೆ ಗೆಲ್ಲಲು ಮೋದಿ ಹೆಸರು ಬೇಕು, ಗಾಣಿಗ ಸಮಾಜ ಬೇಡವೇ..?