Sunday, September 22, 2024
spot_img
More

    Latest Posts

    ಕೆಯುಡಬ್ಲ್ಯುಜೆ ಉಡುಪಿ ಜಿಲ್ಲಾ ಕಾರ್ಯದರ್ಶಿ ಆಗಿ ರಾಜೇಶ್‌ ಗಾಣಿಗ ಆಯ್ಕೆ

    ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಇದರ ಉಡುಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಆಗಿ ರಾಜೇಶ್‌ ಗಾಣಿಗ ಅಚ್ಲಾಡಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

    2022-25ನೇ ಸಾಲಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ ರಾಜೇಶ್‌ ಗಾಣಿಗ ಆಯ್ಕೆ ಆಗಿದ್ದು, ಮೂರು ವರ್ಷಗಳ ಆಡಳಿತಾವಧಿ ಹೊಂದಿದ್ದಾರೆ.

    ಪ್ರಸ್ತುತ ಉದಯವಾಣಿ ಪತ್ರಿಕೆಯ ವರದಿಗಾರರಾಗಿರುವ ಇವರು, ಗಾಣಿಗ ಸಮಾಜದ ಚಟುವಟಿಕೆಗಳಲ್ಲಿ ಹಾಗೂ ಸ್ಥಳೀಯ ಸಂಘ-ಸಂಘಟನೆಗಳಲ್ಲೂ ಸಕ್ರಿಯರಾಗಿದ್ದಾರೆ. ಅಲ್ಲದೆ ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜ (ರಿ.) ಮೂಡುಕೇರಿ, ಬಾರ್ಕೂರು ಇದರ ಪ್ರಧಾನ ಕಾರ್ಯದರ್ಶಿ ಆಗಿಯೂ ರಾಜೇಶ್‌ ಕಾರ್ಯನಿರ್ವಹಿಸುತ್ತಿದ್ದಾರೆ.

    ಸಂಬಂಧಿತ ಸುದ್ದಿ: ಪತ್ರಕರ್ತ-ಕಾದಂಬರಿಕಾರ ಮಂಜುನಾಥ್ ಚಾಂದ್ ಅವರಿಗೆ ಬರಗೂರು ಪುಸ್ತಕ ಪ್ರಶಸ್ತಿ

    ಸಂಬಂಧಿತ ಸುದ್ದಿ: ಕೆಯುಡಬ್ಲ್ಯುಜೆ ಬೆಂಗಳೂರು ನಗರ ಉಪಾಧ್ಯಕ್ಷರಾಗಿ ಲಿಮ್ಕಾ ದಾಖಲೆಯ ಶ್ರೀನಾಥ್‌ ಆಯ್ಕೆ

    ಸಂಬಂಧಿತ ಸುದ್ದಿ: ಆ ದಿನಗಳ ʼಗಾಣಿಗರ ಬಂಧುʼ..!

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!