ಬೆಂಗಳೂರು: ಮುಂಬೈ ಸಾಫಲ್ಯ ಸೇವಾ ಸಂಘದ ಅಧ್ಯಕ್ಷ ಶ್ರೀನಿವಾಸ ಸಫಲ್ಯ ಅವರಿಗೆ ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲದ ನಾಟ್ಯ ನಿಲಯ (ರಿ.) ಸಂಸ್ಥೆಯು ʼನಾಟ್ಯ ನಿಲಯ ಕಲಾ ಪೋಷಕʼ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಇತ್ತೀಚೆಗೆ ಮಂಗಳೂರಿನ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀನಿವಾಸ ಸಫಲ್ಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇವರು ಸಾಮಾಜಿಕವಾಗಿ ಮಾತ್ರವಲ್ಲದೆ ಸಾಂಸ್ಕೃತಿಕವಾಗಿಯೂ ಹಲವಾರು ಸೇವಾಕಾರ್ಯಗಳನ್ನು ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಶಸ್ತಿಗೆ ಪರಿಗಣಿಸಿ ಸನ್ಮಾನಿಸಲಾಗಿದೆ.
ಮಂಗಳೂರು ಶಾಸಕ ಡಿ.ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಸದಸ್ಯ ಪ್ರದೀಪ್ ಕುಮಾರ್ ಕಲ್ಕೂರ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಂಬಂಧಿತ ಸುದ್ದಿ: ಚಾಮರಾಜಪೇಟೆ ಸಮಸ್ಯೆ ಪರಿಹಾರ; ಸಿಆರ್ಡಬ್ಲ್ಯುಎ ಪಾತ್ರ ಮಹತ್ತರ
ಸಂಬಂಧಿತ ಸುದ್ದಿ: ಗಾಣಿಗ ಸಮುದಾಯ ಅತಿ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಲಿ: ಬಿಹಾರ ಸಂಸದ ಪಿಂಟು
ಸಂಬಂಧಿತ ಸುದ್ದಿ: ಆರೋಗ್ಯಕ್ಕಾಗಿ ನೈಸರ್ಗಿಕ ಗಾಣದ ಎಣ್ಣೆ; ರಾಜ್ಯ ಗಾಣಿಗ ಒಕ್ಕೂಟದಿಂದ ಜಾಗೃತಿ