Sunday, September 22, 2024
spot_img
More

    Latest Posts

    ಜೀರ್ಣೋದ್ಧಾರ ಆಗಲಿರುವ ಉಳಿಯ ಧರ್ಮರಸರ ಕ್ಷೇತ್ರಕ್ಕೆ ವಾಸ್ತುಶಿಲ್ಪಿಗಳ ಭೇಟಿ

    ಬೆಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲದ ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರವು ಗಾಣಿಗ ಸಮಾಜದ ಆಡಳಿತದಲ್ಲಿದ್ದು, ಈ ಕ್ಷೇತ್ರವನ್ನು ಜೀರ್ಣೋದ್ಧಾರಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಯೋಜನೆಗಳನ್ನು ಹಾಕಿಕೊಳ್ಳಲಾಗಿದ್ದು, ನಿವೇದನಾ ಪತ್ರಿಕೆಯನ್ನೂ ಬಿಡುಗಡೆ ಮಾಡಲಾಗಿದೆ.

    ಈಗಾಗಲೇ ಹಾಕಿಕೊಂಡಿರುವ ಯೋಜನೆಯಂತೆ ಶ್ರೀಕ್ಷೇತ್ರದಲ್ಲಿ ಜೀರ್ಣೋದ್ಧಾರದ ಜೊತೆಗೆ ಕೆಲವು ಪುನರ್‌ ನಿರ್ಮಾಣ ಕೂಡ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಪ್ರಧಾನ ತಂತ್ರಿಗಳಾದ ಟಿ.ಅನಂತ ಉಪಾಧ್ಯಾಯರ ಜೊತೆಗೆ ಈ ಕ್ಷೇತ್ರಕ್ಕೆ ವಾಸ್ತುಶಿಲ್ಪಿ ಕೃಷ್ಣರಾಜ ತಂತ್ರಿಯವರು ಆಗಮಿಸಿದ್ದು, ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿದರು.

    ಈ ಸಂದರ್ಭದಲ್ಲಿ ಅಂತ ಗುರಿಕಾರ ದೇವು ಮೂಲ್ಯಣ್ಣ, ಜೀರ್ಣೋದ್ಧಾರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು, ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

    ಸಂಬಂಧಿತ ಸುದ್ದಿ: ಗಾಣಿಗ ಸಮುದಾಯ ಹಾಗೂ ಗ್ರಾಮಸ್ಥರಿಂದ ಶುಕ್ರವಾರ ಶ್ರೀಲಕ್ಷ್ಮೀದೇವಿ ದೇವಸ್ಥಾನ ಉದ್ಘಾಟನೆ

    ಸಂಬಂಧಿತ ಸುದ್ದಿ: ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪವೈಭವ

    ಸಂಬಂಧಿತ ಸುದ್ದಿ: ಶ್ರೀಲಕ್ಷ್ಮೀದೇವಿ ದೇವಾಲಯಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ 50 ಸಾವಿರ ರೂ. ಧನಸಹಾಯ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!