ಬೆಂಗಳೂರು: ರಾಜ್ಯಮಟ್ಟದಲ್ಲಿ ಗಾಣಿಗ ಸಮಾಜದ ಬೃಹತ್ ಸಮಾವೇಶ ನಡೆಸುವ ಸಲುವಾಗಿ ಇದೇ ಅಕ್ಟೋಬರ್ 16ರಂದು ರಾಜಧಾನಿ ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ಸಮುದಾಯದ ಹಿರಿಯರು-ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಮುಖಂಡರು ಭಾಗವಹಿಸಬೇಕು ಎಂದು ಆಯೋಜಕರು ಕೋರಿದ್ದಾರೆ.
ಬೆಂಗಳೂರು ಅರಮನೆ ಮೈದಾನದಲ್ಲಿ ಗಾಣಿಗ ಸಮಾಜದ ಬೃಹತ್ ಸಮಾವೇಶ ನಡೆಸಲು, ರಾಜ್ಯಮಟ್ಟದಲ್ಲಿ ಗಾಣಜ್ಯೋತಿ ರಥಯಾತ್ರೆ ನಡೆಸಲು, ಆ ಮೂಲಕ ಗಾಣಿಗ ನಿಗಮ ಮಂಡಳಿ ಸ್ಥಾಪನೆಗೆ ಆಗ್ರಹಿಸುವುದು ಮುಂತಾದ ಉದ್ದೇಶಗಳಿಗೆ ಸಂಬಂಧಿಸಿದಂತೆ ಈ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.
ಮೇಲ್ಕಂಡ ವಿಷಯದ ಕುರಿತಾಗಿ ಮಾತ್ರ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಲು ಅವಕಾಶವಿರುತ್ತದೆ, ಇತರ ಯಾವುದೇ ಹಾಗೂ ವೈಯಕ್ತಿಕ ವಿಚಾರಗಳಿಗೆ ಚರ್ಚಿಸಲು ಅವಕಾಶವಿರುವುದಿಲ್ಲ ಎಂಬುದಾಗಿ ಆಯೋಜಕರು ಹೇಳಿದ್ದಾರೆ.
ಅ. 16ರಂದು ಬೆಳಗ್ಗೆ 10.30 ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಗಾಂಧಿಭವನದಲ್ಲಿ ಈ ಪೂರ್ವಭಾವಿ ಸಭೆ ನಡೆಯಲಿದೆ. ಈ ಸಭೆಗೆ ಗಾಣಿಗ ಸಮಾಜದ ಗುರುಗಳು, ಕರ್ನಾಟಕ ರಾಜ್ಯದ ಎಲ್ಲ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದ ಗಾಣಿಗ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಹೋರಾಟಗಾರರು, ಶಾಸಕರು, ರಾಜಕಾರಣಿಗಳು, ಹಿರಿಯರು ಭಾಗವಹಿಸಿ ಅಭಿಪ್ರಾಯ ತಿಳಿಸುವಂತೆ ಕೋರಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಹೆಚ್ಚಿನ ಮಾಹಿತಿಗಾಗಿ ಆನಂದ ಮಂಡ್ಯ: 9035268437, ಅನಂತಯ್ಯ: 9113503063 ಸಂಪರ್ಕಿಸಬಹುದು ಎಂದು ಯತೀಶ್ ಗಾಣಿಗ ತಿಳಿಸಿದ್ದಾರೆ.
ಸಂಬಂಧಿತ ಸುದ್ದಿ: ಇಲ್ಲಿ ಎಲ್ಲ ಕೋರ್ಸ್ಗಳಿಗೂ ಗಾಣಿಗ ಸಮುದಾಯದ ವಿದ್ಯಾರ್ಥಿಗಳಿಗೆ ಶೇ. 50 ರಿಯಾಯಿತಿ
ಸಂಬಂಧಿತ ಸುದ್ದಿ: ಬಾಲರ್ಕ ಫಿಟ್ನೆಸ್ ಟೀಮ್ ಚಾಂಪಿಯನ್; ಬಾಲರ್ಕ ಪವರ್ಲಿಫ್ಟರ್ಸ್ ಸ್ಟ್ರಾಂಗ್..
ಸಂಬಂಧಿತ ಸುದ್ದಿ: ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ನೂತನ ಅಧ್ಯಕ್ಷ ಸೂರ್ಯನಾರಾಯಣ ಗಾಣಿಗ ಮಟಪಾಡಿ