ಬೆಂಗಳೂರು: ರಾಜ್ಯಮಟ್ಟದ ಕಾರ್ಮಿಕ ಸಂಘಟನೆಯಾಗಿರುವ ಸಮಗ್ರ ಕರ್ನಾಟಕ ಕಾರ್ಮಿಕರ ಸಂಘವು ಹೊಸ ವರ್ಷದ ಪ್ರಯುಕ್ತ ವಿದ್ಯಾರ್ಥಿಗಳಿಗೆ ನೆರವಾಗುವ ಕಾರ್ಯಕ್ರಮವೊಂದನ್ನುಇತ್ತೀಚೆಗೆ ಹಮ್ಮಿಕೊಂಡಿತ್ತು.
ರಾಮನಗರ ಜಿಲ್ಲೆಯಲ್ಲಿ ಸಮಗ್ರ ಕರ್ನಾಟಕ ಕಾರ್ಮಿಕರ ಸಂಘ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಬಡ ಕಾಯಕ/ಕರ್ತವ್ಯ ಯೋಗಿಯ ಮಕ್ಕಳಿಗೆ ಶೈಕ್ಷಣಿಕವಾಗಿ ಅವಶ್ಯವಿರುವ ಕಿಟ್ ವಿತರಣೆ ಮಾಡಲಾಯಿತು. ಅಲ್ಲದೆ ಕಾಯಕ/ಕರ್ತವ್ಯ ಯೋಗಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಟಿ.ಎಂ.ಸಿ.ಯತೀಶ್ ಕುಮಾರ್, ಕಾರ್ಯದರ್ಶಿಗಳಾದ ಲಕ್ಷ್ಮೀಬಾಯಿ, ಎಲ್.ವೇಣುಗೋಪಾಲ್, ಕಾನೂನು ಕಾರ್ಯದರ್ಶಿ ಹರೀಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದು, ಮಕ್ಕಳಿಗೆ ಕಿಟ್ ವಿತರಿಸಿ, ಕಾಯಕ ಯೋಗಿಗಳಿಗೆ ಸನ್ಮಾನಿಸಿದರು.
ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..
ಸಂಬಂಧಿತ ಸುದ್ದಿ: ಪಡುಕೋಣೆ ಸ್ಪೋರ್ಟ್ಸ್ ಮ್ಯಾನೇಜ್ಮೆಂಟ್ನ ಬ್ಯಾಡ್ಮಿಂಟನ್ ಟೂರ್ನಮೆಂಟ್ನಲ್ಲಿ ರಿಷಿತಾ-ಲಮ್ಯಾ ರನ್ನರ್ ಅಪ್
ಸಂಬಂಧಿತ ಸುದ್ದಿ: ಕರ್ನಾಟಕದಲ್ಲೂ ನಮ್ಮ ಪರಿವಾರ ಇದೆ ಎಂಬ ಭಾವನೆ ಮೂಡಿದೆ: ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ