Sunday, September 22, 2024
spot_img
More

    Latest Posts

    ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ     

    ಬೆಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ವಗ್ಗ ರಾಷ್ಟ್ರೀಯ ಹೆದ್ದಾರಿ ಹತ್ತಿರದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿ 352ನೇ ಆರಾಧನಾ ಮಹೋತ್ಸವ ಶುಕ್ರವಾರ ನಡೆಯಿತು.

    ಕ್ಷೇತ್ರದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್ ಮಾರ್ಗದರ್ಶನದಲ್ಲಿ ಗುರುಪೂಜೆ ಸಹಿತ ವಿಶೇಷ  ಪೂಜೆ ಮತ್ತು ಮಂತ್ರಾಕ್ಷತೆ ನೆರವೇರಿತು. ಇದೇ ವೇಳೆ ಶ್ರೀ ಮಹಾಗಣಪತಿ, ಗಾಯತ್ರೀ ದೇವಿ ಮತ್ತು ನಾಗದೇವರಿಗೆ ವಿಶೇಷ ಪೂಜೆ ನಡೆಯಿತು.

    ಕಾರಿಂಜ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಂ. ತುಂಗಪ್ಪ ಬಂಗೇರ, ಪ್ರಮುಖರಾದ  ಬಿ.ರಘು ಸಪಲ್ಯ ಪಾಣೆಮಂಗಳೂರು, ನಾಗೇಶ ಕಲ್ಲಡ್ಕ, ಉಮೇಶ ಬೋಳಂತೂರು, ಜಯಪ್ರಕಾಶ್ ತುಂಬೆ, ಎಂ.ಬೂಬ ಸಪಲ್ಯ ಮುಂಡಬೈಲು, ನವೀನ ಕೋಟ್ಯಾನ್ ಬಿ.ಸಿ.ರೋಡು, ಕೆ.ಬಾಬು ಸಪಲ್ಯ ವಗ್ಗ,  ಮೋಹನ್ ಕೆ. ಶ್ರೀಯಾನ್ ರಾಯಿ, ಜಗದೀಶ ಕುಂದರ್ ಭಂಡಾರಿಬೆಟ್ಟು,ಕೆ.ಟಿ.ಸುಧಾಕರ್ ಇರಾ, ಸೀತಾರಾಮ ಅಗೋಳಿಬೆಟ್ಟು,  ಚಂದ್ರಶೇಖರ ಶೆಟ್ಟಿ ವಾಮದಪದವು, ವಿಜಯ ರೈ ಆಲದಪದವು, ದಿನೇಶ ಶೆಟ್ಟಿ ದಂಬೆದಾರು, ವೇದವ ಗಾಣಿಗ, ಜಯರಾಮ ಕುಲಾಲ್ ಉರುಡಾಯಿ, ಶಶಿಕಲಾ ಪೂಜಾರಿ, ಸುಪ್ರೀತಾ ಪೂಜಾರಿ ಪಿಲಿಂಗಾಲು, ಪದ್ಮನಾಭ ಇಡ್ಕಿದು, ಸದಾಶಿವ ಬರಿಮಾರು, ರಂಜಿನಿ ಸುಜಿತ್ ಬಾಳ್ತಿಲ ಮತ್ತಿತರರು ಇದ್ದರು.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಮಾಜಿ ಸಭಾಪತಿ ವಿ.ಆರ್. ಸುದರ್ಶನ್‌ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಗಾಣಿಗರ ನಿಯೋಗ

    ಸಂಬಂಧಿತ ಸುದ್ದಿ: ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!